ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (ಯುಎನ್ಎಸ್ಸಿ) ಶಾಶ್ವತ ಸದಸ್ಯತ್ವ ಪಡೆಯಲು ಭಾರತ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವವಿ.ಮುರಳೀಧರನ್ ತಿಳಿಸಿದ್ದಾರೆ.
ಈ ಕುರಿತು ರಾಜ್ಯಸಭೆಯಲ್ಲಿ ಎದುರಾದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
‘ಭದ್ರತಾ ಮಂಡಳಿಯ ಸುಧಾರಣೆ ಕುರಿತುಇತರ ದೇಶಗಳ ಜತೆಗಿನ ಮಾತುಕತೆಗಳಲ್ಲಿ ಭಾರತ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಈ ಸಂಬಂಧ, ಇತರ ಸಮಾನ ಮನಸ್ಕ ದೇಶಗಳೊಂದಿಗೆ ಕೆಲಸ ಮಾಡುತ್ತಿದೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.