ಕೋಟ್ಟಯಂ, ಕೇರಳ: ಹದಿಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯುವಕನೊಬ್ಬನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಇಲ್ಲಿನ ಕರಿಂಬುಕಾಯಂ ನಿವಾಸಿ ಅರುಣ್ ಸುರೇಶ್ ಬಂಧಿತ ಆರೋಪಿ. ಸೈಬರ್ ವಿಭಾಗದ ಪೊಲೀಸರ ಸಹಾಯದಿಂದ ಆರೋಪಿ ಇದ್ದ ಸ್ಥಳವನ್ನು ಪತ್ತೆ ಹಚ್ಚಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಡಿಯಲು ನೀರು ಬೇಕೆಂದು ಕೇಳಿ ಬಾಲಕಿಯ ಮನೆಗೆ ತೆರಳಿದ್ದ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದಿದ್ದಾರೆ.
‘ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಆರೋಪಿ, ಬಾಲಕಿಯ ಸಹೋದರನ ಸ್ನೇಹಿತನೆಂದು ಪರಿಚಯಿಸಿಕೊಂಡಿದ್ದ’ ಎಂದೂ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.