ADVERTISEMENT

ಗಣರಾಜ್ಯೋತ್ಸವದಂದು ಹಿಂಸಾಚಾರ: ದೀಪ್‌ ಸಿಧು, ಇತರ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

ಪ್ರಕರಣದ ವಿಚಾರಣೆ ಜುಲೈ 22ಕ್ಕೆ ಮುಂದೂಡಿಕೆ

ಪಿಟಿಐ
Published 12 ಜುಲೈ 2021, 7:51 IST
Last Updated 12 ಜುಲೈ 2021, 7:51 IST
ದೀಪ್ ಸಿಧು (ಸಂಗ್ರಹ ಚಿತ್ರ)
ದೀಪ್ ಸಿಧು (ಸಂಗ್ರಹ ಚಿತ್ರ)   

ನವದೆಹಲಿ: ಗಣರಾಜ್ಯೋತ್ಸವದಂದು ರೈತರ ಪ್ರತಿಭಟನೆ ವೇಳೆ ದೆಹಲಿಯ ಕೆಂಪುಕೋಟೆ ಬಳಿ ನಡೆದ ಹಿಂಸಾಚಾರದ ಸಂಚಿನ ಆರೋಪದ ಮೇಲೆ ಬಂಧಿತರಾಗಿರುವ ನಟ–ಹೋರಾಟಗಾರ ದೀಪ್‌ ಸಿಧು, ಸೋಮವಾರ ದೆಹಲಿ ನ್ಯಾಯಾಲಯಕ್ಕೆ ಹಾಜರಾದರು.

ಸಿಧು ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳು ದೆಹಲಿಯ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್‌ ಗಜೇಂದ್ರ ಸಿಂಗ್ ನಗರ್ ಅವರ ಎದುರು ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದರು.

ಆರೋಪಿಗಳಲ್ಲಿ ಒಬ್ಬರಾದ ಮೊಹಿಂದರ್ ಸಿಂಗ್ ಖಾಸ್ಲಾ, ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ಮ್ಯಾಜಿಸ್ಟ್ರೇಟ್‌ ಗಜೇಂದ್ರ ಸಿಂಗ್ ಅವರು, ಎಲ್ಲ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿ, ಪ್ರಕರಣದ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.