ನವದೆಹಲಿ: ಅದಾನಿ ಸಮೂಹವು ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸುವ ಅಥವಾ ಕಡಿಮೆ ಮಾಡುವ ಕೆಲಸದಲ್ಲಿ ತೊಡಗಿದೆ ಎಂಬ ಆರೋಪದ ಕುರಿತ ತನಿಖೆಯನ್ನು ವಿಶೇಷ ತಂಡವೊಂದಕ್ಕೆ ಅಥವಾ ಸಿಬಿಐಗೆ ವಹಿಸಲು ನಿರಾಕರಿಸಿ ಜನವರಿ 3ರಂದು ನೀಡಿದ್ದ ತೀರ್ಪು ಮರುಪರಿಶೀಲಿಸಬೇಕು ಎಂಬ ಕೋರಿಕೆ ಇದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಜನವರಿ 3ರ ತೀರ್ಪು ಮರುಪರಿಶೀಲನೆಗೆ ಕೋರಿ ಅನಾಮಿಕಾ ಜೈಸ್ವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರು ಇದ್ದ ತ್ರಿಸದಸ್ಯ ಪೀಠವು ವಜಾಗೊಳಿಸಿತು.
ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ಆರೋಪಗಳ ಬಗ್ಗೆ ಸಮಗ್ರವಾದ ತನಿಖೆ ನಡೆಸುತ್ತಿದೆ. ಸೆಬಿಯ ನಡೆಯು ವಿಶ್ವಾಸ ಮೂಡಿಸುವಂತೆ ಇದೆ ಎಂದು ಜನವರಿ 3ರ ತೀರ್ಪಿನಲ್ಲಿ ಕೋರ್ಟ್ ಹೇಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.