ADVERTISEMENT

ಕೋವಿಡ್‌: ತುರ್ತು ಅಧಿವೇಶನ ನಡೆಸಲು ರಾಷ್ಟ್ರಪತಿಗೆ ಅಧೀರ್‌ ರಂಜನ್‌ ಚೌಧರಿ ಪತ್ರ

ಪಿಟಿಐ
Published 10 ಮೇ 2021, 13:47 IST
Last Updated 10 ಮೇ 2021, 13:47 IST
ಅಧೀರ್‌ ರಂಜನ್‌ ಚೌಧರಿ
ಅಧೀರ್‌ ರಂಜನ್‌ ಚೌಧರಿ   

ನವದೆಹಲಿ: ಕೋವಿಡ್‌ ಪರಿಸ್ಥಿತಿ ಕುರಿತು ಚರ್ಚಿಸಲು ತುರ್ತು ಸಂಸತ್‌ ಅಧಿವೇಶನವನ್ನು ಕರೆಯುವಂತೆ ಲೋಕಸಭೆಯಲ್ಲಿನ ಕಾಂಗ್ರೆಸ್‌ ಪಕ್ಷದ ಮುಖಂಡ ಅಧೀರ್‌ ರಂಜನ್‌ ಚೌಧರಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಬಿಕ್ಕಟ್ಟಿನಿಂದ ಬಳಲುತ್ತಿರುವ ಸಾರ್ವಜನಿಕರಿಗೆ ಪರಿಹಾರ ಒದಗಿಸುವ ಮಾರ್ಗಗಳನ್ನು ಕಂಡುಕೊಳ್ಳಲು ಸಂಸತ್‌ ಅಧಿವೇಶನ ಕರೆಯುವುದು ಅಗತ್ಯ ಎಂದು ಚೌಧರಿ ಪತ್ರದಲ್ಲಿ ತಿಳಿಸಿದ್ದಾರೆ.

‘ಕೊರೊನಾ ಸಮಸ್ಯೆಯನ್ನು ನಿಭಾಯಿಸಲು ರಾಷ್ಟ್ರೀಯ ಪರಿಹಾರವನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ’ ಎಂದೂ ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.