ಸೂರತ್: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಸಾರಾಂ ಬಾಪು ಪುತ್ರ ನಾರಾಯಣ ಸಾಯಿಗೆ ಸೆಷನ್ಸ್ ಕೋರ್ಟ್ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪಿ.ಎಸ್. ಗಧ್ವಿ ಈ ತೀರ್ಪು ನೀಡಿದ್ದಾರೆ. ಜೈಲು ಶಿಕ್ಷೆಯ ಜೊತೆಗೆ ಸಂತ್ರಸ್ತೆಗೆ ₹5 ಲಕ್ಷ ನೀಡುವಂತೆ ಸೂಚಿಸಲಾಗಿದೆ.
ಪ್ರಕರಣದಲ್ಲಿ,ಇಬ್ಬರು ಮಹಿಳೆಯರು ಸೇರಿದಂತೆ ನಾರಾಯಣ ಸಾಯಿಯ ಮೂವರು ಸಹಾಯಕರಿಗೆ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಈತನ ಕಾರು ಚಾಲಕ ರಾಜ್ಕುಮಾರ್ ಅಲಿಯಾಸ್ ರಮೇಶ್ ಮಲ್ಹೋತ್ರನಿಗೆ ಆರು ತಿಂಗಳು ಶಿಕ್ಷೆ ವಿಧಿಸಲಾಗಿದೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ರಾಜಸ್ಥಾನದ ನ್ಯಾಯಾಲಯ ಆಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಅಹಮದಾಬಾದ್ನ ಆಶ್ರಮದಲ್ಲಿ ಇಬ್ಬರು ಸಹೋದರಿಯರ ಮೇಲೆ ಆಸಾರಾಂ ಬಾಪು ಪುತ್ರನೂ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.