ADVERTISEMENT

ದೆಹಲಿ ಆಯ್ತು, ಪಂಜಾಬ್‌ನಲ್ಲೂ ಬಹುಮತ ಸಾಬೀತುಪಡಿಸಲಿದೆ ಎಎಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಸೆಪ್ಟೆಂಬರ್ 2022, 10:05 IST
Last Updated 19 ಸೆಪ್ಟೆಂಬರ್ 2022, 10:05 IST
ಭಗವಂತ್ ಮಾನ್
ಭಗವಂತ್ ಮಾನ್   

ಚಂಡೀಗಢ: ಪಂಜಾಬ್‌ನ ಎಎಪಿ ಸರ್ಕಾರವು ವಿಶೇಷ ಅಧಿವೇಶನ ಕರೆದಿದ್ದು ಬಹುಮತ ಸಾಬೀತುಪಡಿಸಲಿದೆ.

‘ಜನರು ಇಟ್ಟಿರುವ ನಂಬಿಕೆಗೆ ಬೆಲೆ ಇಲ್ಲ. ಸೆಪ್ಟೆಂಬರ್ 22ರ ಗುರುವಾರ ಪಂಜಾಬ್ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಾಗಿದೆ. ಅಂದು ನಾವು ವಿಶ್ವಾಸಮತ ಯಾಚಿಸುವ ಮೂಲಕ ಬಹುಮತ ಸಾಬೀತುಪಡಿಸಲಿದ್ದೇವೆ. ಕ್ರಾಂತಿಗೆ ಜಯವಾಗಲಿ’ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಟ್ವೀಟ್ ಮಾಡಿದ್ದಾರೆ.

ದೆಹಲಿಯ ಎಎಪಿ ಸರ್ಕಾರ ಸೆಪ್ಟೆಂಬರ್ 1ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಿ ಬಹುಮತ ಸಾಬೀತುಪಡಿಸಿತ್ತು. ಬಳಿಕ ಮಾತನಾಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ‘ಬಿಜೆಪಿಯ ಆಪರೇಷನ್‌ ಕಮಲ ವಿಫಲವಾಗಿದೆ ಎಂಬುದನ್ನು ತೋರಿಸಲು ವಿಶ್ವಾಸಮತವನ್ನು ಸಾಬೀತು ಮಾಡಲು ಮುಂದಾದೆವು. ಬಿಜೆಪಿಯ ತಂತ್ರಗಾರಿಕೆಯನ್ನು ಸೋಲಿಸಿದ್ದೇವೆ ಎಂಬುದನ್ನು ಸಾಬೀತುಮಾಡಿದ್ದೇವೆ’ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.