ADVERTISEMENT

ಪ್ರತಿಪಕ್ಷದ ಸ್ಥಾನದಲ್ಲಿ ಕೂರಲು ಬಿಜೆಪಿ ತಯಾರಿ ನಡೆಸಬೇಕು: ತರೂರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಅಕ್ಟೋಬರ್ 2022, 14:18 IST
Last Updated 9 ಅಕ್ಟೋಬರ್ 2022, 14:18 IST
ಶಶಿ ತರೂರ್
ಶಶಿ ತರೂರ್   

ಮುಂಬೈ: ಪ್ರತಿಪಕ್ಷದ ಸ್ಥಾನದಲ್ಲಿ ಕೂರಲು ಭಾರತೀಯ ಜನತಾ ಪಕ್ಷ (ಬಿಜೆಪಿ) ತಯಾರಿ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ, ಸಂಸದ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

ಇದನ್ನೂ ಓದಿ:

2024ರ ಲೋಕಸಭಾ ಚುನಾವಣೆಯ ಬಳಿಕ ಬಿಜೆಪಿ ವಿಪಕ್ಷದ ಸ್ಥಾನದಲ್ಲಿ ಕೂರುವುದು ಖಚಿತ ಎಂದು ಅವರು ಹೇಳಿದರು.

ADVERTISEMENT

ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಅಗತ್ಯವಿದೆ. ನಾನೇ ಬದಲಾವಣೆಯ ಪರಿವರ್ತಕ ಎಂದು ಸಹ ಹೇಳಿದರು.

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ. ಒಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೆ ಇನ್ನೊಂದೆಡೆ ದ್ವೇಷ ಹರಡಲಾಗುತ್ತದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅನುಭವಿ ನಾಯಕರನ್ನು ಹೊಂದಿದ್ದು, ದೇಶವನ್ನು ಮುನ್ನಡೆಸಲು ಸಮರ್ಥರಾಗಿದ್ದಾರೆ. ಮಗದೊಮ್ಮೆ ಜನರ ವಿಶ್ವಾಸವನ್ನು ಗೆಲ್ಲಬೇಕಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.