ADVERTISEMENT

ಚೆನ್ನೈ: ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ

ಪಿಟಿಐ
Published 9 ಜನವರಿ 2021, 15:19 IST
Last Updated 9 ಜನವರಿ 2021, 15:19 IST
ಪಳನಿಸ್ವಾಮಿ
ಪಳನಿಸ್ವಾಮಿ   

ಚೆನ್ನೈ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕೆ.ಪಳನಿಸ್ವಾಮಿ ಅವರನ್ನು ಆಡಳಿತಾರೂಢ ಎಐಎಡಿಎಂಕೆ ಘೋಷಿಸಿದೆ.

ಚುನಾವಣೆ ಸಂದರ್ಭದಲ್ಲಿ ಪಕ್ಷದ ಕಾರ್ಯತಂತ್ರ ರೂಪಿಸುವ ಜವಾಬ್ದಾರಿಯನ್ನು ಪಳನಿಸ್ವಾಮಿ‌ ಮತ್ತು ಪನ್ನೀರ್ ಸೆಲ್ವಂ ಅವರಿಗೆ ಎಐಎಡಿಎಂಕೆಯ ನಾಯಕರ ಸಭೆ ನೀಡಿದೆ. ಅದೇ ರೀತಿ ನಿರ್ವಹಣಾಸಮಿತಿಯೊಂದನ್ನು ನೇಮಿಸಲು ತೀರ್ಮಾನಿಸಿದ್ದು, ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುವ ಸಂದರ್ಭ ಈ ಸಮಿತಿಯು ಪ್ರಮುಖ ಪಾತ್ರ ವಹಿಸಲಿದೆ.

ಏಪ್ರಿಲ್‌– ಮೇ ಅವಧಿಯಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯನ್ನು ಎ.ಕೆ. ಪಳನಿಸ್ವಾಮಿ ಅವರ ನೇತೃತ್ವದಲ್ಲೇ ಪಕ್ಷ ಎದುರಿಸಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.