ADVERTISEMENT

ಕಾರು ಅಪಘಾತದಲ್ಲಿ ತಮಿಳುನಾಡಿನ ಶಾಸಕ ರಾಜೇಂದ್ರನ್ ಸಾವು

ಏಜೆನ್ಸೀಸ್
Published 23 ಫೆಬ್ರುವರಿ 2019, 9:51 IST
Last Updated 23 ಫೆಬ್ರುವರಿ 2019, 9:51 IST
ಎಸ್. ರಾಜೇಂದ್ರನ್
ಎಸ್. ರಾಜೇಂದ್ರನ್   

ಚೆನ್ನೈ:ತಮಿಳುನಾಡಿನ ವಿಲ್ಲುಪುರಂ ಎಐಎಡಿಎಂಕೆ ಶಾಸಕ ಎಸ್. ರಾಜೇಂದ್ರನ್ (2) ಕಾರು ಅಪಘಾತದಲ್ಲಿ ಶನಿವಾರ ಬೆಳಿಗ್ಗೆ ನಿಧನರಾದರು.

ಶಾಸಕರು ತಿಂಡಿಮ್‌ಗೆ ತೆರಳುತ್ತಿದ್ದಾಗ ಅವರಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಅವರ ಎದೆ ಮತ್ತು ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೂ ಪ್ರಯೋಜನವಾಗಲಿಲ್ಲ.ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಇನ್ನೂ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಮಿಳುನಾಡಿನ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಘಟನೆಗೆ ಸಂತಾಪ ಸೂಚಿಸಿದ್ದು, ರಾಜೇಂದ್ರ ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.ರಾಜೇಂದ್ರ ಅವರು ಮೊದಲ ಬಾರಿಯ ಶಾಸಕರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.