ADVERTISEMENT

ಉಸ್ತುವಾರಿ ಕಾರ್ಯದರ್ಶಿಗಳ ನೇಮಕ- ಕಾಂಗ್ರೆಸ್‌ನಿಂದ ಆದೇಶ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2021, 19:37 IST
Last Updated 11 ಅಕ್ಟೋಬರ್ 2021, 19:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಸಂಸದ ಕುಲದೀಪ್ ರೈ ಶರ್ಮಾ ಹಾಗೂ ಶಾಸಕ ರಾಮಿಂದರ್ ಸಿಂಗ್ ಆವ್ಲಾ ಅವರನ್ನು ಕರ್ನಾಟಕ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಕಾಂಗ್ರೆಸ್ ಪಕ್ಷವು ಸೋಮವಾರ ನೇಮಕ ಮಾಡಿದೆ.

ಶರ್ಮಾ ಅವರು ಅಂಡಮಾನ್‌ ನಿಕೋಬಾರ್‌ ಲೋಕಸಭೆ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಆವ್ಲಾ ಅವರು ಪಂಜಾಬ್‌ನ ಜಲಾಲಾಬಾದ್‌ ವಿಧಾನಸಭೆ ಕ್ಷೇತ್ರದ ಶಾಸಕ.

ಈ ಇಬ್ಬರನ್ನೂ ಪಕ್ಷದ ರಾಜ್ಯ ಉಸ್ತುವಾರಿಯಾಗಿರುವ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುರ್ಜೇವಾಲಾ ಅವರೊಂದಿಗೆ ಕಾರ್ಯ ನಿರ್ವಹಿಸಲು ಸೂಚಿಸಿ ನೇಮಕ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.