ADVERTISEMENT

ಕೋವಿಡ್‌ ವಿರುದ್ಧದ ಹೋರಾಟಕ್ಕೆ ವಾಯುಮಾಲಿನ್ಯ ಅಡ್ಡಿ: ವಿಜ್ಞಾನಿಗಳ ಅಭಿಪ್ರಾಯ

ಪಿಟಿಐ
Published 27 ಅಕ್ಟೋಬರ್ 2020, 8:26 IST
Last Updated 27 ಅಕ್ಟೋಬರ್ 2020, 8:26 IST
ದೆಹಲಿ ವಾಯು ಮಾಲಿನ್ಯ –ಪ್ರಾತಿನಿಧಿಕ ಚಿತ್ರ 
ದೆಹಲಿ ವಾಯು ಮಾಲಿನ್ಯ –ಪ್ರಾತಿನಿಧಿಕ ಚಿತ್ರ    

ನವದೆಹಲಿ: ‘ಭಾರತದ ಕೋವಿಡ್‌ ವಿರುದ್ಧದ ಹೋರಾಟಕ್ಕೆ ವಾಯು ಮಾಲಿನ್ಯವು ಅಡ್ಡಿಯಾಗುತ್ತಿದೆ’ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ವಾಯು ಮಾಲಿನ್ಯ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದಲೇ ಕೊರೊನಾ ಸೋಂಕಿತರು ಹಾಗೂ ಕೋವಿಡ್‌ನಿಂದ ಮೃತಪಡುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ ಎಂದು ಈಗಾಗಲೇ ಹಲವು ಸಂಶೋಧನೆಗಳು ತಿಳಿಸಿವೆ.

ನವದೆಹಲಿ ಸೇರಿದಂತೆ ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚಿದೆ. ಕಲುಷಿತ ಹೊಗೆಯಿಂದಾಗಿ ಗಾಳಿಯ ಗುಣಮಟ್ಟವು ಕ್ಷಿಪ್ರಗತಿಯಲ್ಲಿ ಕುಸಿಯುತ್ತಿದೆ ಎಂದು ಅಮೆರಿಕದ ಹಾರ್ವರ್ಡ್‌ ವಿಶ್ವವಿದ್ಯಾಲಯದ ಸಂಶೋಧಕರು ಎಚ್ಚರಿಸಿದ್ದಾರೆ.

ADVERTISEMENT

ಹಾರ್ವಡ್‌ ವಿಶ್ವವಿದ್ಯಾಲಯವು ಸೆಪ್ಟೆಂಬರ್‌ನಲ್ಲಿ ಅಧ್ಯಯನ ಕೈಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.