ಮುಂಬೈ: ಪುಣೆಯಿಂದ ಬೆಂಗಳೂರಿಗೆ ಹೊರಡಲು ಸಿದ್ಧವಾಗಿದ್ದ ಏರ್ಏಷ್ಯಾ ಇಂಡಿಯಾ ವಿಮಾನದಲ್ಲಿ ಭಾನುವಾರ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಕೊನೇ ಕ್ಷಣದಲ್ಲಿ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನದಲ್ಲಿ ಎಷ್ಟು ಮಂದಿ ಪ್ರಯಾಣಿಕರು ಇದ್ದರು ಎಂಬುದು ತಿಳಿದು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ವಿಮಾನಯಾನ ಸಂಸ್ಥೆಯು ತಿಳಿಸಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.