ADVERTISEMENT

ಏರ್‌ಸೆಲ್‌–ಮ್ಯಾಕ್ಸಿಸ್‌ ಪ್ರಕರಣ: ಆಗಸ್ಟ್‌ 7ರವರೆಗೂ ಚಿದಂಬರಂ, ಕಾರ್ತಿ ನಿರಾಳ

​ಪ್ರಜಾವಾಣಿ ವಾರ್ತೆ
Published 10 ಜುಲೈ 2018, 6:51 IST
Last Updated 10 ಜುಲೈ 2018, 6:51 IST
ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ 
ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ    

ನವದೆಹಲಿ:ಏರ್‌ಸೆಲ್‌–ಮ್ಯಾಕ್ಸಿಸ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಆಗಸ್ಟ್‌ 7ರ ವರೆಗೂ ಬಂಧನ ಭೀತಿಯಿಂದ ಪಾರಾಗಿದ್ದಾರೆ.

₹3,500 ಕೋಟಿ ಮೊತ್ತದ ಏರ್‌ಸೆಲ್‌ ಮ್ಯಾಕ್ಸಿಸ್‌ ಮತ್ತು ₹ 305 ಕೋಟಿ ಐಎನ್‌ಎಕ್ಸ್‌ ಮೀಡಿಯಾ ಹಗರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಚಿದಂಬರಂ ಮೇ 30ರಂದು ಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದಲ್ಲಿ ಎಲ್ಲ ಸಾಕ್ಷ್ಯಗಳು ಮರುಸೃಷ್ಟಿಯಂತೆ ಕಾಣುತ್ತಿರುವುದಾಗಿ ಹೇಳಿದ್ದರು.

ಸಿಬಿಐ ಮತ್ತು ಇಡಿ 2011 ಹಾಗೂ 2012ರಲ್ಲಿ ದಾಖಲಿಸಿದ್ದ ಏರ್‌ಸೆಲ್‌–ಮ್ಯಾಕ್ಸಿಸ್‌ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಮಂಗಳವಾರದ ವರೆಗೂ ಕಾರ್ತಿ ಬಂಧನಕ್ಕೆ ಕೋರ್ಟ್‌ ಮಧ್ಯಂತರ ತಡೆ ನೀಡಿತ್ತು.

ADVERTISEMENT

ಚಿದಂಬರಂ ಮತ್ತು ಕಾರ್ತಿ ಬಂಧನಕ್ಕೆ ನೀಡಲಾಗಿದ್ದ ಮಧ್ಯಂತರ ತಡೆ ಆದೇಶವನ್ನು ದೆಹಲಿ ಹೈಕೋರ್ಟ್ ಮಂಗಳವಾರ ಆಗಸ್ಟ್‌ 7ರವರೆಗೂ ವಿಸ್ತರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.