ADVERTISEMENT

ಏರ್‌ಸೆಲ್‌–ಮ್ಯಾಕ್ಸಿಸ್‌ ವಿಚಾರಣೆ: ಹಿಂದೆ ಸರಿದ ನ್ಯಾಯಮೂರ್ತಿ

ಸುಪ್ರೀಂ ಕೋರ್ಟ್‌ ಸುದ್ದಿ

ಪಿಟಿಐ
Published 20 ಜೂನ್ 2018, 17:01 IST
Last Updated 20 ಜೂನ್ 2018, 17:01 IST

ನವದೆಹಲಿ: ಏರ್‌ಸೆಲ್‌–ಮ್ಯಾಕ್ಸಿಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ಹಿಂದೆ ಸರಿದಿದ್ದಾರೆ.

ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿ ರಾಜೇಶ್ವರ್‌ ಸಿಂಗ್‌ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎನ್ನುವ ಪ್ರಕರಣದಲ್ಲಿ ಮೊಕದ್ದಮೆ ಹೂಡಲು ತಮಗೂ ಅವಕಾಶ ನೀಡಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಅರ್ಜಿ ಸಲ್ಲಿಸಿದ್ದರು.

ತನಿಖೆ ವಿಳಂಬಗೊಳಿಸುವ ಉದ್ದೇಶದಿಂದಲೇ ರಾಜೇಶ್ವರ್‌ಸಿಂಗ್‌ ವಿರುದ್ಧ ರಜನೀಶ್‌ ಕಪೂರ್‌ ಅರ್ಜಿ ಸಲ್ಲಿಸಿದ್ದಾರೆ ಎಂದು ಸ್ವಾಮಿ ದೂರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.