ಲಖನೌ: ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಕ್ಷದ 20 ಕಾರ್ಯಕರ್ತರು, ಬೆಂಬಲಿಗರ ಮೇಲೆ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ.
ಪತ್ರಕರ್ತ ನೀಡಿದ ದೂರು ಆಧರಿಸಿ ಪಕ್ವಾರಾ ಠಾಣೆಯಲ್ಲಿ ಶುಕ್ರವಾರ ರಾತ್ರಿ ಪ್ರಕರಣ ದಾಖಲಿಸಲಾಗಿದೆ. ದೂರಿನ ಪ್ರಕಾರ, ಮಾರ್ಚ್ 11ರ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಕೆಲ ಪ್ರಶ್ನೆಗಳಿಂದ ಅಖಿಲೇಶ್ ಯಾದವ್ ಇರಿಸುಮುರಿಸಿಗೆ ಒಳಗಾದರು. ಇದರಿಂದ ವಿಚಲಿತರಾದ ಅವರ ಬೆಂಬಲಿಗರು, ಭದ್ರತಾ ಸಿಬ್ಬಂದಿ ಹಲ್ಲೆ ಮಾಡಿದರು ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಕೆಲ ಪತ್ರಕರ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.