ADVERTISEMENT

ಉತ್ತರಪ್ರದೇಶ: ಕಾಂಗ್ರೆಸ್‌ಗೆ ಸೊನ್ನೆ –ಅಖಿಲೇಶ್‌ ಯಾದವ್‌ ಭವಿಷ್ಯ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2021, 7:29 IST
Last Updated 4 ಡಿಸೆಂಬರ್ 2021, 7:29 IST
ಅಖಿಲೇಶ್‌
ಅಖಿಲೇಶ್‌   

ಲಖನೌ: ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷ ಶೂನ್ಯ ಸಂಪಾದನೆ ಮಾಡಲಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಭವಿಷ್ಯ ನುಡಿದಿದ್ದಾರೆ.

ವಿಧಾನಸಭೆ ಚುನಾವಣೆಯ ಸಮಾವೇಶದಲ್ಲಿ ಮಾತನಾಡಿದ ಅವರು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಅಧಿಕಾರ ಹಿಡಿದಂತೆ ಉತ್ತರಪ್ರದೇಶದಲ್ಲೂ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲೂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಪಕ್ಷ ಚುನಾವಣೆಗೆ ಸ್ಪರ್ದಿಸಲಿ ಎಂದು ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ADVERTISEMENT

ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷ ಪ್ರಬಲವಾಗಿದೆ. ಬಿಜೆಪಿ ವಿರುದ್ಧ ಇರುವ ಸಮಾನಮನಸ್ಕ ಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಅಖಿಲೇಶ್‌ ಮಾಡುತ್ತಿದ್ದಾರೆ.

ಸದ್ಯ ಅವರು ಕಾಂಗ್ರೆಸ್‌ ವಿರುದ್ಧ ಮಾತನಾಡುತ್ತಿದ್ದು ತೃಣಮೂಲ ಕಾಂಗ್ರೆಸ್‌ನ ವರಿಷ್ಠೆ ಮಮತಾ ಪರವಾಗಿ ಬ್ಯಾಟ್‌ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.