ADVERTISEMENT

ಮುಸ್ಲಿಮರ ಮತಕ್ಕಾಗಿ ಅಖಿಲೇಶ್ ಮತಾಂತರವಾಗಲೂಬಹುದು: ಉತ್ತರ ಪ್ರದೇಶ ಸಚಿವ ಶುಕ್ಲ

ಪಿಟಿಐ
Published 3 ನವೆಂಬರ್ 2021, 10:41 IST
Last Updated 3 ನವೆಂಬರ್ 2021, 10:41 IST
ಅಖಿಲೇಶ್‌ ಯಾದವ್
ಅಖಿಲೇಶ್‌ ಯಾದವ್   

ಬಲಿಯಾ, ಉತ್ತರ ಪ್ರದೇಶ: ಮುಸ್ಲಿಮರ ಮತಗಳನ್ನು ಪಡೆಯುವಾಗ ಸಲುವಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಮತಾಂತರವಾಗಲೂ ಸಿದ್ಧರಿದ್ದಾರೆ ಎಂದು ಉತ್ತರ ಪ್ರದೇಶ ಸಚಿವ ಆನಂದಸ್ವರೂಪ್‌ ಶುಕ್ಲ ಆರೋಪಿಸಿದರು.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಖಿಲೇಶ್‌ ಯಾದವ್‌ಗೆ ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‌ಐ ಬೆಂಬಲ ಇದೆ. ಐಎಸ್‌ಐನಿಂದ ಆರ್ಥಿಕ ನೆರವನ್ನೂ ಪಡೆಯುತ್ತಿರಬಹುದು’ ಎಂದು ಆರೋಪಿಸಿದರು.

‘ಇಸ್ಲಾಮಿಕ್‌ ಜಗತ್ತಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸವಾಲಾಗಿ ಪರಿಣಮಿಸಿದ್ದಾರೆ. ಹೀಗಾಗಿ ಅಖಿಲೇಶ್‌ ಯಾದವ್ ಮುಸ್ಲಿಮರ ಬೆಂಬಲ ಪಡೆಯುತ್ತಿದ್ದಾರೆ’ ಎಂದು ಟೀಕಿಸಿದರು.

ADVERTISEMENT

ಹರ್ದೋಯಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಖಿಲೇಶ್‌, ಮಹಾತ್ಮಗಾಂಧಿ, ಸರ್ದಾರ ವಲ್ಲಭಭಾಯಿ ಪಟೇಲ್‌, ಜವಾಹರಲಾಲ್‌ ನೆಹರು ಅವರಂತೆ ಮುಹಮ್ಮದ್‌ ಅಲಿ ಜಿನ್ನಾ ಅವರೂ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು’ ಎಂದು ಹೇಳಿದ್ದರು.

ಅಖಿಲೇಶ್‌ ಯಾದವ್‌ ಅವರ ಈ ಹೇಳಿಕೆಗೆ ಭಾರಿ ಟೀಕೆಗಳು ವ್ಯಕ್ತವಾಗಿದ್ದವು. ಈಗ ಸಚಿವ ಶುಕ್ಲ ಅವರಿಂದಲೂ ಟೀಕೆ ಕೇಳಿಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.