ಹ್ಯೂಸ್ಟನ್: ಭಾರತದಶಾಲಾಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಅಕ್ಷಯ ಪಾತ್ರೆ ಪ್ರತಿಷ್ಠಾನದ ಟೆಕ್ಸಾಸ್ ಶಾಖೆಯು ವರ್ಚುವಲ್ ಕಾರ್ಯಕ್ರಮದ ಮೂಲಕ 9,50,000 ಡಾಲರ್(₹7 ಕೋಟಿ 11 ಲಕ್ಷ) ಸಂಗ್ರಹಿಸಿದೆ.
ಜೂನ್ 25ರಂದು ಆಸ್ಟಿನ್, ಡಲ್ಲಾಸ್ ಮತ್ತು ಹ್ಯೂಸ್ಟನ್ ನಗರಗಳಲ್ಲಿ ಈ ಬಗ್ಗೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಭಾರತದಲ್ಲಿ ಬಡಮಕ್ಕಳಿಗೆ ಶಿಕ್ಷಣ ಒದಗಿಸುವುದು ಮತ್ತು ಹಸಿವು ನೀಗಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿಶ್ವದ1,000ಕ್ಕೂ ಹೆಚ್ಚು ಉದ್ಯಮಿಗಳು, ಸ್ವಯಂ ಸೇವಾ ಸಂಘಟನೆಗಳು, ಸರ್ಕಾರಿ ಅಧಿಕಾರಿಗಳು ಭಾಗವಹಿಸಿದ್ದರು.
ಈ ವೇಳೆ ಇನ್ಫೊಸಿಸ್ ಸಹ ಸ್ಥಾಪಕರು ನಾರಾಯಣ ಮೂರ್ತಿ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿವೆಸ್ಟರ್ನ್ ಡಿಜಿಟಲ್ ಅಧ್ಯಕ್ಷ ಮತ್ತು ಅಕ್ಷಯ ಪಾತ್ರ ಫೌಂಡೇಶನ್ನ ಅಮೆರಿಕದ ಅಧ್ಯಕ್ಷ ಶಿವ ಶಿವರಾಂ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.