ಹೈದರಾಬಾದ್: ಆಂಧ್ರಪ್ರದೇಶ ಸಚಿವ ಸಂಪುಟದ ಎಲ್ಲಾ 24 ಸಚಿವರು ಗುರುವಾರ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಈ ಕ್ರಮ ಅನುಸರಿಸಲಾಗಿದೆ.
ಸಚಿವರು ತಮ್ಮ ರಾಜೀನಾಮೆ ಪತ್ರಗಳನ್ನು ಕ್ಯಾಬಿನೆಟ್ ಸಭೆಯಲ್ಲೇ ನೀಡಿದ್ದಾರೆ. ಸದ್ಯ ರಾಜೀನಾಮೆ ನೀಡಿರುವ ಸಚಿವರು 34 ತಿಂಗಳಿಂದ ಅಧಿಕಾರದಲ್ಲಿದ್ದರು.
ಏಪ್ರಿಲ್ 11 ರಂದು ಮಂತ್ರಿಮಂಡಲ ಪುನರ್ರಚನೆಯಾಗಲಿದೆ.
ಮುಖ್ಯಮಂತ್ರಿ ಜಗನ್ ಬುಧವಾರ ರಾತ್ರಿ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರೊಂದಿಗೆ ಸಭೆ ನಡೆಸಿದ್ದು, ಸಂಪುಟ ಪುನಾರಚನೆ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.