ನವದೆಹಲಿ:ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಎಲ್ಲ ಅಂತರ್ದೇಶೀಯಪ್ರಯಾಣಿಕ ವಿಮಾನಗಳ ಹಾರಾಟಕ್ಕೆ ಬುಧವಾರದಿಂದ ನಿರ್ಬಂಧ ವಿಧಿಸಿದೆ. ಸರಕು ಸಾಗಣೆ ವಿಮಾನಗಳ ಹಾರಾಟ ಎಂದಿನಂತೆ ಇರಲಿದೆ.
'ಮಾರ್ಚ್ 24ರ ಮಧ್ಯರಾತ್ರಿಯಿಂದ ಎಲ್ಲ ಅಂತರ್ದೇಶೀಯವಿಮಾನಗಳ ಹಾರಾಟ ನಿಲ್ಲಲಿದೆ. ಆದರೆ ಸರಕು ಸಾಗಣೆ ವಿಮಾನಗಳಿಗೆ ಈ ನಿರ್ಬಂಧ ಇರುವುದಿಲ್ಲ' ಎಂದು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ದೇಶದಲ್ಲಿ ಕೊರೊನಾವೈರಸ್ ಸೋಂಕಿತರ ಪ್ರಕರಣಗಳು ಸೋಮವಾರ 415ಕ್ಕೆ ಮುಟ್ಟಿದೆ. ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ.
ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾರ್ಚ್ 29ರವರೆಗೆ ವಿದೇಶಗಳಿಗೆವೈಮಾನಿಕ ಸೇವೆಗಳನ್ನು ನಿರ್ಬಂಧಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.