ADVERTISEMENT

ರಾಜ್ಯಸಭೆ: ಎಎಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಪಿಟಿಐ
Published 24 ಮಾರ್ಚ್ 2022, 19:14 IST
Last Updated 24 ಮಾರ್ಚ್ 2022, 19:14 IST
ಹರಭಜನ್ ಸಿಂಗ್
ಹರಭಜನ್ ಸಿಂಗ್   

ಚಂಡೀಗಡ: ಪಂಜಾಬ್‌ನಿಂದ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಐವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್, ಪಕ್ಷದ ಮುಖಂಡ ರಾಘವ್ ಛಡ್ಡಾ, ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಸಂಸ್ಥಾಪಕ ಅಶೋಕ್ ಮಿತ್ತಲ್, ದೆಹಲಿ ಐಐಟಿ ಸಹ ಪ್ರಾಧ್ಯಾಪಕ ಸಂದೀಪ್ ಪಾಠಕ್ ಹಾಗೂ ಉದ್ಯಮಿ ಸಂಜೀವ್ ಅರೋರಾ ಅವರು ಮಾರ್ಚ್ 31ರ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು.

ನಾಮಪತ್ರ ವಾಪಸ್ ಪಡೆಯಲು ಗುರುವಾರ ಕೊನೆಯ ದಿನವಾಗಿತ್ತು. ಬೇರೆ ಪಕ್ಷದ ಯಾವ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿಎಎಪಿಯ ಎಲ್ಲ ಐದು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಸುರಿಂದರ್ ಪಾಲ್ ಹೇಳಿದ್ದಾರೆ.

ADVERTISEMENT

ಶಿರೋಮಣಿ ಅಕಾಲಿದಳದ ಸುಖದೇವ್ ಧಿಂಡ್ಸಾ ಹಾಗೂ ನರೇಶ್ ಗುಜ್ರಾಲ್, ಕಾಂಗ್ರೆಸ್‌ನ ಪ್ರತಾಪ್ ಸಿಂಗ್ ಬಾಜ್ವಾ ಹಾಗೂ ಶಂಶೇರ್ ಸಿಂಹ ದೂಲೊ, ಬಿಜೆಪಿಯ ಶ್ವೇತ್ ಮಲಿಕ್ ಅವರ ರಾಜ್ಯಸಭಾ ಸದಸ್ಯತ್ವದ ಅವಧಿಯು ಏಪ್ರಿಲ್ 9ರಂದು ಕೊನೆಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.