ADVERTISEMENT

ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಶಿಕ್ಷಕರ ಭಾರತ ಯಾತ್ರೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2023, 13:16 IST
Last Updated 5 ಸೆಪ್ಟೆಂಬರ್ 2023, 13:16 IST
<div class="paragraphs"><p>ಕನ್ಯಾಕುಮಾರಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾರತ ಯಾತ್ರೆಗೆ&nbsp;ವಿಜಯ ವಸಂತ ಚಾಲನೆ ನೀಡಿದರು</p></div>

ಕನ್ಯಾಕುಮಾರಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾರತ ಯಾತ್ರೆಗೆ ವಿಜಯ ವಸಂತ ಚಾಲನೆ ನೀಡಿದರು

   

ಕನ್ಯಾಕುಮಾರಿ: ಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ಶಿಕ್ಷಕರ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಖಿಲ ಭಾರತ ಶಿಕ್ಷಕರ ಫೆಡರೇಷನ್ ನೀಡಿರುವ ಕರೆಯಂತೆ ಭಾರತ ಯಾತ್ರೆಗೆ ಮಂಗಳವಾರ ಇಲ್ಲಿ ಚಾಲನೆ ದೊರೆಯಿತು.

ಕನ್ಯಾಕುಮಾರಿ ಸಂಸದ ವಿಜಯ ವಸಂತ ಅವರು ಚಾಲನೆ ನೀಡಿದರು. ಶಿಕ್ಷಣ ತಜ್ಞ ಡಾ. ನಿರಂಜನಾರಾಧ್ಯ, ಫೆಡರೇಷನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ, ಖಜಾಂಚಿ ಹರಿಗೋವಿಂದನ್‌, ತಮಿಳುನಾಡು ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿ ರಂಗರಾಜನ್‌, ಅಧ್ಯಕ್ಷ ಲಕ್ಷ್ಮೀನಾರಾಯಣ, ಪುದುಚೇರಿ ಅಧ್ಯಕ್ಷ ಸೆಂಥಿಲ್ ಪಾಲ್ಗೊಂಡಿದ್ದರು.

ADVERTISEMENT

‘ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. ಕೇಂದ್ರವು ತಾನು ತೆಗೆದುಕೊಂಡ ನಿರ್ಣಯಗಳನ್ನು ರಾಜ್ಯಗಳಿಗೆ ಕಳುಹಿಸಬೇಕು. ಹೊಸ ಪಿಂಚಣಿ ಯೋಜನೆ ನೌಕರರಿಗೆ ಮಾರಕವಾಗಿದೆ. ಶಿಕ್ಷಕರು ನೆಮ್ಮದಿಯಿಂದ ಕೆಲಸ ನಿರ್ವಹಿಸುವುದೇ ಕಷ್ಟವಾಗಿದೆ. ಸರ್ಕಾರವು ಈ ಕುರಿತು ತಕ್ಷಣ ಕ್ರಮ ಕೈಗೊಂಡು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು’ ಎಂದು ಬಸವರಾಜ ಗುರಿಕಾರ ಹೇಳಿದರು.

ಡಾ. ಪಿ.ನಿರಂಜನಾರಾಧ್ಯ ಮಾತನಾಡಿ, ‘ರಾಷ್ಟ್ರೀಯ ಶಿಕ್ಷಣ ನೀತಿಯಡಿ ಶಿಕ್ಷಣ ಹಾಗೂ ಶಿಕ್ಷಕರಿಗೆ ತೊಂದರೆಯಾಗಲಿದೆ. ಎನ್‌ಇಪಿಯಲ್ಲಿರುವ ವಿದ್ಯಾರ್ಥಿ ಹಾಗೂ ಶಿಕ್ಷಕ ವಿರೋಧಿ ಅಂಶಗಳನ್ನು ಕೈಬಿಡಬೇಕು. ಬಜೆಟ್‌ನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಹಣ ಮೀಸಲಿಡಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.