ನವದೆಹಲಿ: ಇದೇ 11ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಉಭಯ ಸದನಗಳಲ್ಲಿಯೂ ಕಲಾಪ ಸುಗಮವಾಗಿ ನಡೆಯಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಸೋಮವಾರ ಸರ್ವಪಕ್ಷಗಳ ಸಭೆ ಕರೆದಿದೆ.
ಲೋಕಸಭಾ ಚುನಾವಣೆಗೂ ಮುನ್ನ ನಡೆಯಲಿರುವ ಪೂರ್ಣಪ್ರಮಾಣದ ಕೊನೆಯ ಸಂಸತ್ ಅಧಿವೇಶನ ಇದಾಗಿದೆ. ಅಧಿವೇಶನ ಆರಂಭವಾಗುವ ಡಿ. 11ರಂದೇ ಪಂಚರಾಜ್ಯಗಳ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ.
ರಾಜ್ಯಸಭೆಯಲ್ಲಿ ಬಾಕಿ ಉಳಿದಿರುವ ತ್ರಿವಳಿ ತಲಾಖ್ ಕುರಿತ ಮಸೂದೆಯನ್ನು ಮಂಡಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ತ್ರಿವಳಿ ತಲಾಖ್ ನೀಡುವುದು ಶಿಕ್ಷಾರ್ಹ ಅಪರಾಧ ಎಂಬ ಅಂಶವನ್ನು ಈ ಮಸೂದೆ ಒಳಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.