ನವದೆಹಲಿ: ದೆಹಲಿಯಿಂದ ಹೊರಟಿದ್ದ ಅಲಯನ್ಸ್ ಏರ್ ವಿಮಾನವು ಮಧ್ಯಪ್ರದೇಶದ ಜಬಲ್ಪುರ ವಿಮಾನ ನಿಲ್ದಾಣದಲ್ಲಿ ರನ್ ವೇಗಿಂತಲೂ ಮುಂದೆ ಹೋಗಿರುವ ಘಟನೆ ಶನಿವಾರ ನಡೆದಿದೆ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ(ಡಿಜಿಸಿಎ) ತಿಳಿಸಿದೆ. ವಿಮಾನ ಪ್ರಯಾಣಿಕರು ಅಥವಾ ಸಿಬ್ಬಂದಿ ಸೇರಿ ಯಾರಿಗೂ ತೊಂದರೆಯಾಗಿಲ್ಲ ಎಂದಿರುವ ಡಿಜಿಸಿಎ, ಈ ಘಟನೆ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಹೇಳಿದೆ.
55 ಪ್ರಯಾಣಿಕರು ಇದ್ದ ಎಟಿಆರ್-72 ವಿಮಾನವು ಶನಿವಾರ ಬೆಳಿಗ್ಗೆ 11.30ಕ್ಕೆ ದೆಹಲಿಯಿಂದ ಮಧ್ಯಪ್ರದೇಶದ ಜಬಲ್ಪುರಕ್ಕೆ ಹೊರಟ್ಟಿತ್ತು. ಮಧ್ಯಾಹ್ನ 1.15ಕ್ಕೆ ಜಬಲ್ಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಈ ಘಟನೆ ನಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.