ADVERTISEMENT

ಮುಂಬೈ: ಕೋವಿಡ್ ಎರಡನೇ ಅಲೆಯನ್ನು ಮೆಟ್ಟಿನಿಂತಿರುವ ಅಮರಾವತಿ ದೇಶಕ್ಕೆ ಮಾದರಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2021, 2:17 IST
Last Updated 13 ಏಪ್ರಿಲ್ 2021, 2:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ವಿದರ್ಭ ವಿಭಾಗದ ಅಮರಾವತಿ ಜಿಲ್ಲೆಯು ಕೋವಿಡ್ ಎರಡನೇ ಅಲೆಯನ್ನು ಮೆಟ್ಟಿನಿಂತಿರುವ ಮಾದರಿ ದೇಶದ ಗಮನ ಸೆಳೆದಿದೆ.

ಫೆಬ್ರುವರಿ ಆರಂಭದಲ್ಲಿ ಜಿಲ್ಲೆಯಲ್ಲಿ ದಿನಕ್ಕೆ 1,200 ಹೊಸ ಪ್ರಕರಣಗಳು ವರದಿಯಾಗುತ್ತಿದ್ದವು. ಮೊದಲಿಗೆ ವಾರಾಂತ್ಯದ ಲಾಕ್‌ಡೌನ್ ವಿಧಿಸಲಾಯಿತು. ಬಳಿಕ 10–12 ದಿನಗಳ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಯಿತು. ಪ್ರಕರಣಗಳು 250ಕ್ಕೆ ಇಳಿಕೆಯಾದವು’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಯಶೋಮತಿ ಠಾಕೂರ್ ತಿಳಿಸಿದ್ದಾರೆ.

ಲಾಕ್‌ಡೌನ್‌ಗೆ ವಿರೋಧ ವ್ಯಕ್ತವಾದರೂ ಅದರಲ್ಲಿ ಯಶಸ್ಸು ಸಿಕ್ಕಿತು. ಪರಿಸ್ಥಿತಿ ತಿಳಿಯಾದ ಬಳಿಕ ಅಂಗಡಿಗಳನ್ನು ಸಂಜೆ 5 ಗಂಟೆವರೆಗೆ ತೆರೆಯಲು ಅನುಮತಿ ನೀಡಲಾಯಿತು. ಜಿಲ್ಲೆಯಲ್ಲಿ ದಿನಕ್ಕೆ 5 ಸಾವಿರ ಮಂದಿಗೆ ಲಸಿಕೆ ಹಾಕಲಾಯಿತು. ಮಹಾರಾಷ್ಟ್ರ ಸರ್ಕಾರವು ಈಗ ಅಮರಾವತಿ ಮಾದರಿಯನ್ನು ಅನುಸರಿಸಲು ಮುಂದಾಗಿದೆ ಎಂದು ಠಾಕೂರ್ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.