ಶ್ರೀನಗರ: ಈ ಬಾರಿಯ ಅಮರನಾಥ ಯಾತ್ರೆಯನ್ನು ಕೋವಿಡ್–19 ಬಿಕ್ಕಟ್ಟಿನಿಂದಾಗಿ ರದ್ದು ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಜಿ.ಸಿ.ಮುರ್ಮು ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಶ್ರೀ ಅಮರನಾಥ ದೇವಾಲಯ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ‘ದಿನಕ್ಕೆ ಎರಡು ಬಾರಿ ವರ್ಚುವಲ್ ದರ್ಶನವನ್ನು ನೇರ ಪ್ರಸಾರ ಮಾಡುತ್ತೇವೆ’ ಎಂದು ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.