ADVERTISEMENT

ಸ್ಫೋಟಕಗಳಿದ್ದ ವಾಹನ ಪ್ರಕರಣ: ಬಂಧಿತ ಅಧಿಕಾರಿಯ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಪಿಟಿಐ
Published 16 ಏಪ್ರಿಲ್ 2021, 11:42 IST
Last Updated 16 ಏಪ್ರಿಲ್ 2021, 11:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆಯ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣ ಸಂಬಂಧ ಬಂಧಿತರಾಗಿರುವ ಪೊಲೀಸ್ ಅಧಿಕಾರಿ ರಿಯಾಜ್ ಖಾಜಿ (ಸೇವೆಯಿಂದ ಅಮಾನತುಗೊಂಡಿದ್ದಾರೆ) ಅವರನ್ನು ಕೋರ್ಟ್‌ ಇದೇ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಎಸಿಪಿ ಖಾಜಿ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಏಪ್ರಿಲ್ 11ರಂದು ಬಂಧಿಸಿತ್ತು. ತನಿಖಾ ಸಂಸ್ಥೆಯು ತನ್ನ ವಶಕ್ಕೆ ನೀಡಲು ಮನವಿ ಮಾಡದ ಕಾರಣ ಕೋರ್ಟ್‌, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಪ್ರಕರಣದ ಪ್ರಮುಖ ಆರೋಪಿ ಸಚಿನ್‌ ವಾಜೆ ಅವರ ಜೊತೆಗೂಡಿ ಸಂಚು ನಡೆಸಿದ ಆರೋಪ ಅವರ ಮೇಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT