ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಗುರುವಾರ ದಕ್ಷಿಣ ಮುಂಬೈಯ ಹೋಟೆಲ್ ಒಂದರಲ್ಲಿ ಶೋಧ ನಡೆಸಿದೆ.
‘ಬಾಬುಲ್ನಾಥ್ ದೇವಾಸ್ಥಾನದ ಬಳಿಯಿರುವ ಹೋಟೆಲ್ನಲ್ಲಿ ಎನ್ಐಎ ಮಧ್ಯಾಹ್ನ 12.45ರ ಸುಮಾರಿಗೆ ಶೋಧ ನಡೆಸಿದೆ. ಈ ವೇಳೆ ಅಧಿಕಾರಿಗಳು ಹೋಟೆಲ್ ಸಿಬ್ಬಂದಿ ಮತ್ತು ಗ್ರಾಹಕರಿಗೆ ಅಲ್ಲಿಂದ ಹೊರ ನಡೆಯುವಂತೆ ಸೂಚಿಸಿದರು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
‘ಸದ್ಯ ಹೋಟೆಲ್ನಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆಬಂಧನಕ್ಕೊಳಗಾಗಿರುವ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಇಲ್ಲಿಗೆ ಈಚೆಗೆ ಕರೆತರಲಾಗಿತ್ತು’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.