ADVERTISEMENT

ಮಿರ್ಜಾಪುರ | ಅಂಬೇಡ್ಕರ್‌ ಪ್ರತಿಮೆ ಧ್ವಂಸ: ಆಕ್ರೋಶ

ಪಿಟಿಐ
Published 10 ಜೂನ್ 2025, 15:37 IST
Last Updated 10 ಜೂನ್ 2025, 15:37 IST
<div class="paragraphs"><p>ಡಾ.ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆ</p></div>

ಡಾ.ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆ

   

ಪಿಟಿಐ ಚಿತ್ರ

ಮಿರ್ಜಾಪುರ: ಇಲ್ಲಿನ ಚಾಕ್ಕೊದರ್‌ ಗ್ರಾಮದಲ್ಲಿ ಅಂಬೇಡ್ಕರ್‌ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 

ADVERTISEMENT

‘ಸೋಮವಾರ ರಾತ್ರಿ ಘಟನೆ ನಡೆದಿದೆ. 24 ಗಂಟೆಗಳ ಒಳಗಾಗಿ ಹೊಸ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ವಾಪಸ್‌ ಪಡೆದಿದ್ದಾರೆ’ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಓಂಪ್ರಕಾಶ್‌ ಸಿಂಗ್‌ ತಿಳಿಸಿದ್ದಾರೆ. 

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್‌ ಅವರು ಆರು ತಿಂಗಳ ಹಿಂದಷ್ಟೇ ಈ ಪ್ರತಿಮೆ ಉದ್ಘಾಟಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.