ನವದೆಹಲಿ: ರೈತರ ಪ್ರತಿಭಟನೆ ಬಳಿಕ ಭದ್ರತೆ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗೃಹ ಕಾರ್ಯದರ್ಶಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಉನ್ನತಮಟ್ಟದ ಸಭೆ ನಡೆಸಿದರು.
ಈ ಸಭೆಯಲ್ಲಿ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮತ್ತು ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್.ಶ್ರೀವಾಸ್ತವ ಭಾಗವಹಿಸಿದ್ದರು.
ಸಾವಿರಾರು ರೈತರು ಬ್ಯಾರಿಕೇಡ್ಗಳನ್ನು ಮುರಿದು ಕೆಂಪುಕೋಟೆ ತಲುಪಿದ್ದು ಮತ್ತು ರೈತರು ಪೊಲೀಸರೊಂದಿಗೆ ಘರ್ಷಣೆಗೆ ಇಳಿದ ಬಗ್ಗೆ ವಿವರಣೆ ನೀಡಿದರು.
ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಭದ್ರತೆಗಾಗಿ
ಅರೆಸೇನಾ ಪಡೆಯನ್ನು ನಿಯೋಜಿಸುವ ಸಾಧ್ಯತೆಗಳಿವೆ. ಆದಾಗ್ಯೂ ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.