ADVERTISEMENT

ವಿವಾದ ಸೃಷ್ಟಿಸುವ ಹೇಳಿಕೆಗಳಿಂದ ದೂರವಿರಿ:ಗಿರಿರಾಜ್ ಸಿಂಗ್‌ಗೆ ಅಮಿತ್ ಶಾ ತಾಕೀತು 

​ಪ್ರಜಾವಾಣಿ ವಾರ್ತೆ
Published 4 ಜೂನ್ 2019, 16:00 IST
Last Updated 4 ಜೂನ್ 2019, 16:00 IST
   

ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆಯೋಜಿಸಿದ್ದ ಇಫ್ತಾರ್ ಕೂಟದ ಬಗ್ಗೆ ಕೇಂದ್ರ ಸಚಿವಗಿರಿರಾಜ್ ಅವರಟ್ವೀಟ್ ವಿವಾದ ಸೃಷ್ಟಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ರೀತಿಯ ಹೇಳಿಕೆಗಳಿಂದ ದೂರವಿರಿ ಎಂದು ಹೇಳಿದ್ದಾರೆ.

ಅಮಿತ್ ಶಾ ಅವರು ಗಿರಿರಾಜ್ ಸಿಂಗ್ ಅವರಿಗೆ ಫೋನ್ ಮಾಡಿ ಈ ರೀತಿಯ ಹೇಳಿಕೆ ನೀಡಬೇಡಿ ಎಂದು ಹೇಳಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮಾಧ್ಯಮಗಳು ಸುದ್ದಿ ಮಾಡಲಿ ಎಂಬ ಕಾರಣಕ್ಕಾಗಿ ಗಿರಿರಾಜ್ ಸಿಂಗ್ ಇದೆಲ್ಲಾ ಮಾಡುತ್ತಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನೇತಾರ ನಿತೀಶ್ ಕುಮಾರ್ ಪ್ರತಿಕ್ರಿಯಿಸಿದ್ದರು.ನಿತೀಶ್ ಕುಮಾರ್ ಪ್ರತಿಕ್ರಿಯೆ ಬೆನ್ನಲ್ಲೇ ಅಮಿತ್ ಶಾ ಅವರು ಗಿರಿರಾಜ್ ಸಿಂಗ್‌ಗೆ ತಾಕೀತು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.