ಚಂಡೀಗಡ: ಕಳೆದ ವಾರ ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕುಟುಂಬ ಸದಸ್ಯರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಭೇಟಿಯಾಗಲಿದ್ದಾರೆ.
ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಉದ್ಘಾಟಿಸಲು ಸಚಿವರು ಚಂಡೀಗಡಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಮೂಸೆವಾಲಾ ಕುಟುಂಬ ಸದಸ್ಯರಿಗೆ ಶಾ ಅವರು ಸಾಂತ್ವನ ಹೇಳಲಿದ್ದಾರೆ.
ಕಾಂಗ್ರೆಸ್ ಮುಖಂಡ, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಕಳೆದ ಭಾನುವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಅವರನ್ನು ಪಂಜಾಬಿಗೆ ಕರೆತಂದು ವಿಚಾರಣೆ ನಡೆಸಲಾಗುವುದು ಎಂದು ಪಂಜಾಬ್ ಪೊಲೀಸರು ಬುಧವಾರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.