ಛೋಟಾ ಉದೇಪುರ (ಗುಜರಾತ್): ಕಾಂಗ್ರೆಸ್ ಪಕ್ಷವು ತನ್ನ 50 ವರ್ಷಗಳ ಆಡಳಿತದಲ್ಲಿ ದೇಶದ ಬಡವರಿಗಾಗಿ ಕೊಟ್ಟ ಕೊಡುಗೆ ಏನು ಎಂಬುದನ್ನುಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರುಬಿಜೆಪಿಯ ಯುವ ಘಟಕದ ಅಧ್ಯಕ್ಷರ ಜತೆ ಚರ್ಚೆ ಮಾಡಲಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸವಾಲು ಹಾಕಿದ್ದಾರೆ.
‘ನಿಮ್ಮ ಪಕ್ಷವು ಬಡವರಿಗಾಗಿ ಏನು ಮಾಡಿದೆ ಎಂಬ ಮಾಹಿತಿಯೊಂದಿಗೆ ವಡೋದರಾದ ಯಾವುದೇ ಗಲ್ಲಿಗೆ ಬನ್ನಿ, ನಮ್ಮ ಯುವ ಮೋರ್ಚಾದ ಅಧ್ಯಕ್ಷರು ನಿಮಗೆ ಪ್ರತಿಕ್ರಿಯೆ ನೀಡಲಿದ್ದಾರೆ’ ಎಂದು ಶಾ ಹೇಳಿದ್ದಾರೆ.
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದವೂ ಸೇರಿದಂತೆ ಭ್ರಷ್ಟಾಚಾರದ ಬಗ್ಗೆ ಚರ್ಚೆಗೆ ಬನ್ನಿ ಎಂದು ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಹಲವು ಬಾರಿ ಸವಾಲು ಹಾಕಿದ್ದರು.ಅದಕ್ಕೆ ಶಾ ಅವರು ಈ ರೀತಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.