ADVERTISEMENT

ಅಮೃತಸರದಲ್ಲಿ ಗ್ರೆನೇಡ್‌ ದಾಳಿ: ಒಬ್ಬನ ಬಂಧನ

ಪಿಟಿಐ
Published 21 ನವೆಂಬರ್ 2018, 18:16 IST
Last Updated 21 ನವೆಂಬರ್ 2018, 18:16 IST

ಚಂಡಿಗಡ:‘ಅಮೃತಸರದಲ್ಲಿ ಭಾನುವಾರ ನಡೆದ ಗ್ರೆನೇಡ್‌ ದಾಳಿಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ಸಿಂಗ್‌ ಹೇಳಿದರು.

‘ಬಿಕ್ರಮಜಿತ್‌ಸಿಂಗ್‌ ಎಂಬಾತನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಅವತಾರ್‌ ಸಿಂಗ್‌ ಶೋಧಕ್ಕಾಗಿ ಜಾಲ ಬೀಸಲಾಗಿದೆ’ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ಬುಧವಾರ ತಿಳಿಸಿದರು.

ಇಬ್ಬರು ಆರೋಪಿಗಳ ಭಾವಚಿತ್ರಗಳನ್ನು ಪ್ರದರ್ಶಿಸಿದ ಅವರು, ‘ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಪಾಕಿಸ್ತಾನದ ಐಎಸ್‌ಐ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಗ್ರೆನೇಡ್‌ ದಾಳಿ ಸಹ ಇದರ ಭಾಗವಾಗಿ ನಡೆಸಿರುವ ಭಯೋತ್ಪಾದನಾ ಕೃತ್ಯ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.