ನವದೆಹಲಿ: ಲಾಕ್ಡೌನ್ ವಿಸ್ತರಣೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ ಮೊದಲ ಬಾರಿಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಗುರುವಾರ ಮಾತುಕತೆ ನಡೆಸಿದರು.
ಮೇ 31ರಂದು ನಾಲ್ಕನೇ ಹಂತದ ಲಾಕ್ಡೌನ್ ಮುಕ್ತಾಯ ಗೊಳ್ಳುವುದರಿಂದ ದೂರವಾಣಿ ಮೂಲಕ ಮುಖ್ಯಮಂತ್ರಿಗಳ ಜತೆ ಮಾತನಾಡಿ ಅಭಿಪ್ರಾಯಗಳನ್ನು ಪಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯಗಳಲ್ಲಿ ಯಾವ ಪ್ರದೇಶಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದೆ ಹಾಗೂ ಜೂನ್ 1ರಿಂದ ಯಾವೆಲ್ಲಾ ವಲಯಗಳ ಚಟುವಟಿಕೆಗಳನ್ನು ಆರಂಭಿಸಲು ಬಯಸುತ್ತೀರಿ ಎನ್ನುವ ಮಾಹಿತಿ ಪಡೆದುಕೊಂಡಿದ್ದಾರೆ. ಲಾಕ್ಡೌನ್ ಅನ್ನು ಸಂಪೂರ್ಣವಾಗಿ ತೆಗೆಯುವುದು ಬೇಡ ಎನ್ನುವುದು ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯವಾಗಿದೆ ಎಂದೂ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.