ತ್ರಿಶೂರ್ : ಮೊಬೈಲ್ ಫೋನ್ ಬಳಸುತ್ತಿರುವ ವೇಳೆ ಮೊಬೈಲ್ ಸ್ಟೋಟಗೊಂಡು ಎಂಟು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕೇರಳದ ತ್ರಿಶೂರ್ನಲ್ಲಿ ನಡೆದಿದೆ.
ಆದಿತ್ಯಶ್ರೀ ಮೊಬೈಲ್ ಸ್ಟೋಟಕ್ಕೆ ಮೃತಳಾದ ಬಾಲಕಿ ಎಂದು ತಿಳಿದುಬಂದಿದೆ. ತಿರುವಿಲ್ವಮಲ ನಿವಾಸಿಯಾದ ಆದಿತ್ಯಶ್ರೀ ಮೂರನೇ ತರಗತಿ ಓದುತ್ತಿದ್ದಳು. ಸೋಮವಾರ ಬೆಳಿಗ್ಗೆ 10.30ರ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿನ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.