ADVERTISEMENT

ಛತ್ತೀಸಗಢ | ಗಣಿಯಲ್ಲಿ ನಕ್ಸಲರು ಇಟ್ಟ ಬಾಂಬ್ ಸ್ಫೋಟ: ಕಾರ್ಮಿಕನಿಗೆ ಗಾಯ

ಪಿಟಿಐ
Published 5 ಫೆಬ್ರುವರಿ 2025, 6:30 IST
Last Updated 5 ಫೆಬ್ರುವರಿ 2025, 6:30 IST
<div class="paragraphs"><p>ನಕ್ಸಲರು (ಪ್ರಾತಿನಿಧಿಕ ಚಿತ್ರ)</p></div>

ನಕ್ಸಲರು (ಪ್ರಾತಿನಿಧಿಕ ಚಿತ್ರ)

   

ನಾರಾಯಣಪುರ: ಗಣಿ ಪ್ರದೇಶದಲ್ಲಿ ನಕ್ಸಲರು ಹುದುಗಿಸಿದ್ದ ಕಚ್ಚಾ ಬಾಂಬ್ ಸ್ಫೋಟಿಸಿ ಕಾರ್ಮಿಕನೋರ್ವ ಗಾಯಗೊಂಡ ಘಟನೆ ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಛೋಟೆ ಡೊಂಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆಮ್‌ದಾಯಿ ಘಾಟಿ ಕಬ್ಬಿನದ ಅದಿರು ಗಣಿಗಾರಿಕೆ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಘಟನೆ ಸಂಭವಿಸಿದೆ. ಈ ಸ್ಥಳ ರಾಜಧಾನಿ ರಾಯಪುರದಿಂದ 350 ಕಿ.ಮೀ ದೂರದಲ್ಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ADVERTISEMENT

ಗಾಯಗೊಂಡ ಕಾರ್ಮಿಕನನ್ನು ಛೋಟೆ ಡೊಂಗರ್‌ನ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿದೆ.

ಘಟನೆ ನಡೆದ ಪ್ರದೇಶದವನ್ನು ಜಯಸ್ವಾಲ್ ನೆಕೊ ಇಂಡಸ್ಟ್ರೀಸ್ ಲಿಮಿಟೆಡ್‌ಗೆ ಗಣಿಗಾರಿಗೆ ನಡೆಸಲು ನೀಡಲಾಗಿತ್ತು. ಈ ಯೋಜನೆಯನ್ನು ನಕ್ಸಲರು ಹಲವು ವರ್ಷಗಳಿಂದ ವಿರೋಧಿಸುತ್ತಿದ್ದರು.

2023ರ ನವೆಂಬರ್‌ನಲ್ಲಿ ಇದೇ ಗಣಿಯಲ್ಲಿ ನಕ್ಸಲರು ಇಟ್ಟಿದ್ದ ಕಚ್ಚಾ ಬಾಂಬ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.