ಹೈದರಾಬಾದ್:ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರಗಳಿಗೆ ನೀಡುತ್ತಿರುವ ನೆರವಿನ ಭಾಗವಾಗಿ ಗ್ರೀನ್ಫೀಲ್ಡ್ ಕಾಲೊನಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಮನವಿ ಮಾಡಿದ್ದಾರೆ.
ಈ ಸಂಬಂಧ ಪ್ರಧಾನಿಗೆ ಪತ್ರ ಬರೆದಿರುವ ಜಗನ್, ಕೇಂದ್ರ ಸರ್ಕಾರವು ಆಂಧ್ರ ಪ್ರದೇಶಕ್ಕೆ ಕಳೆದ7 ವರ್ಷಗಳಲ್ಲಿ ಅಂದಾಜು3 ಲಕ್ಷ ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದರೊಂದಿಗೆ ಸುಮಾರು 3 ಕೋಟಿಗೂ ಹೆಚ್ಚು ಮನೆಗಳನ್ನು ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.
ಮುಂದುವರಿದು, ಆಂಧ್ರ ಪ್ರದೇಶ ಸರ್ಕಾರವು68,381 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದ್ದು, 17,005 ಗ್ರೀನ್ಫೀಲ್ಡ್ ಕಾಲೊನಿಗಳಲ್ಲಿನ 31 ಲಕ್ಷ ಫಲಾನುಭವಿಗಳಿಗೆ ವಸತಿ ಹಂಚಿಕೆ ಮಾಡಿದೆ.ಪಿಎಂಎವೈ ಗ್ರಾಮೀಣ ಮತ್ತು ನಗರ ಯೋಜನೆಗಳಡಿ 28.30 ಲಕ್ಷ ಮನೆಗಳನ್ನು ನಿರ್ಮಿಸಲು ಫಲಾನುಭವಿಗಳಿಗೆರಾಜ್ಯ ಸರ್ಕಾರವು ಅಂದಾಜು 50,944 ಕೋಟಿ ರೂ. ನೆರವು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.
ಕಾಲೋನಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ದೊಡ್ಡ ಮಟ್ಟದಲ್ಲಿ ವೆಚ್ಚವನ್ನು ಭರಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದು. ಹೀಗಾಗಿ ಮೂಲ ಸೌಕರ್ಯ ಅಭಿವೃದ್ಧಿಗೆ ನೆರವಾಗುವಂತೆ ವಸತಿ, ನಗರಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯಗಳಿಗೆ ನಿರ್ದೇಶನ ನೀಡಬೇಕು ಎಂದುಪ್ರಧಾನಿಯನ್ನು ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.