ADVERTISEMENT

ಕೃಷ್ಣಾ ಜಲವಿವಾದ: ಆಂಧ್ರ ಸಿಎಂ ಜಗನ್‌ಮೋಹನ್ ರೆಡ್ಡಿ ನೇತೃತ್ವದಲ್ಲಿ ಸಭೆ

ಪಿಟಿಐ
Published 11 ಅಕ್ಟೋಬರ್ 2023, 3:16 IST
Last Updated 11 ಅಕ್ಟೋಬರ್ 2023, 3:16 IST
ವೈ.ಎಸ್. ಜಗನ್‌ಮೋಹನ್ ರೆಡ್ಡಿ
ವೈ.ಎಸ್. ಜಗನ್‌ಮೋಹನ್ ರೆಡ್ಡಿ   

ಅಮರಾವತಿ: ‘ಕೃಷ್ಣಾ ಜಲವಿವಾದ ನ್ಯಾಯಮಂಡಳಿ II’ಗೆ ಕೇಂದ್ರ ಸಂಪುಟವು ಷರತ್ತುಗಳನ್ನು ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್‌ಮೋಹನ್ ರೆಡ್ಡಿ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆಯಿತು.

ಬಿರ್ಜೆಶ್ ಕುಮಾರ್ ನೇತೃತ್ವದ ನ್ಯಾಯಮಂಡಳಿಯ ನಿರ್ದೇಶನಗಳನ್ನು ಒಳಗೊಂಡಂತೆ ಕೇಂದ್ರವು ಗೆಜೆಟ್‌ ಅಧಿಸೂಚನೆಯನ್ನು ಹೊರಡಿಸಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲು ಸಭೆಯು ನಿರ್ಧರಿಸಿತು.

ಈ ವಿಷಯದಲ್ಲಿ ರಾಜ್ಯದ ರೈತರ ಹಿತಾಸಕ್ತಿ ರಕ್ಷಿಸಲು ಪೂರಕಕ್ರಮ ಕೈಗೊಳ್ಳಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅವರಿಗೆ ಪತ್ರ ಬರೆಯಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.