ADVERTISEMENT

ಆಂಧ್ರಪ್ರದೇಶದಲ್ಲಿ ‌ಪಟಾಕಿ ದುರಂತ: ಇಬ್ಬರು ಸಾವು, ಇಬ್ಬರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಅಕ್ಟೋಬರ್ 2022, 7:09 IST
Last Updated 23 ಅಕ್ಟೋಬರ್ 2022, 7:09 IST
ವಿಜಯವಾಡದಲ್ಲಿ ‌ಪಟಾಕಿ ದುರಂತ
ವಿಜಯವಾಡದಲ್ಲಿ ‌ಪಟಾಕಿ ದುರಂತ   

ಅಮರಾವತಿ: ಆಂಧ್ರಪ್ರದೇಶದ ವಿಜಯವಾಡ ನಗರದಲ್ಲಿ ಪಟಾಕಿ ಅಂಗಡಿಯಲ್ಲಿ ಭಾನುವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.

ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಜಿಮ್ಖಾನಾ ಮೈದಾನದಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯಲಾಗಿದೆ. 19 ಅಂಗಡಿಗಳ ಪೈಕಿ ಮೂರು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.

ಮೂರು ಪಟಾಕಿ ಅಂಗಡಿಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಈ ಪೈಕಿ ಒಂದು ಅಂಗಡಿಯಲ್ಲಿ ಕಾರ್ಮಿಕರು ಮಲಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಿರುಪತಿಯಲ್ಲಿ ಪಟಾಕಿ ಅವಘಡ: ತಿರುಪತಿ ಜಿಲ್ಲೆಯ ವಡಮಲಪೇಟಾದಲ್ಲಿ ಪಟಾಕಿ ದುರಂತ ಸಂಭವಿಸಿದ್ದು, ₹16 ರಿಂದ ₹18 ಲಕ್ಷ ಮೌಲ್ಯದ ಪಟಾಕಿಗಳು ನಾಶವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.