ADVERTISEMENT

ಜಗನ್‌ಗೆ ಚೂರಿ ಇರಿತ ಪ್ರಕರಣ: ತನಿಖೆ ಎನ್ಐಎಗೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2019, 12:20 IST
Last Updated 4 ಜನವರಿ 2019, 12:20 IST
   

ಹೈದರಾಬಾದ್‌: ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಮೇಲೆ ನಡೆದ ಚೂರಿ ಇರಿತ ಪ್ರಕರಣದ ತನಿಖೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಒಪ್ಪಿಸಿದೆ.

ಆಂಧ್ರಪ್ರದೇಶ ಪೊಲೀಸರವಿಶೇಷ ತನಿಖಾ ತಂಡ (ಎಸ್‌ಐಟಿ) ಸದ್ಯ ಈ ಪ್ರಕರಣದ ತನಿಖೆ ನಡೆಸುತ್ತಿದೆ.

ರಾಜ್ಯ ಪೊಲೀಸರ ತನಿಖೆಯಲ್ಲಿ ವಿಶ್ವಾಸವಿಲ್ಲ. ತನಿಖೆಯನ್ನು ಕೇಂದ್ರ ತನಿಖಾ ತಂಡಕ್ಕೆ ಒಪ್ಪಿಸಬೇಕೆಂದು ಜಗನ್‌ ನ್ಯಾಯಾಲಯವನ್ನು ಕೋರಿದ್ದರು.

ADVERTISEMENT

ವಿಶಾಖಪಟ್ಟಣ ವಿಮಾನನಿಲ್ದಾಣದಲ್ಲಿ ಅಕ್ಟೋಬರ್‌ 25ರಂದು ಜಗನ್‌ ಮೇಲೆ ಚೂರಿ ಇರಿತ ನಡೆದಿತ್ತು.

ಆರೋಪಿಯಿಂದ ವಶಕ್ಕೆ ಪಡೆದ ಆಯುಧ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.