ADVERTISEMENT

ಆಂಧ್ರ: ಸೂರ್ಯಲಂಕ ಬೀಚ್‌ನಲ್ಲಿ ಈಜಲು ಹೋಗಿ ಮೂವರು ಮಕ್ಕಳು ಸಾವು, ಮೂವರು ಕಣ್ಮರೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2022, 13:54 IST
Last Updated 4 ಅಕ್ಟೋಬರ್ 2022, 13:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಮರಾವತಿ: ಆಂಧ್ರ ಪ್ರದೇಶದ ಬಾಪಟ್ಲ ಜಿಲ್ಲೆಯ ಸೂರ್ಯಲಂಕ ಬೀಚ್‌ನಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಇನ್ನೂ ಮೂವರು ಕಣ್ಮರೆಯಾಗಿದ್ದಾರೆ.

ಈ ವೇಳೆ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಬಾಪಟ್ಲ ಜಿಲ್ಲೆಯ ಎಸ್‌ಪಿ ವಕುಲ್‌ ಜಿಂದಾಲ್‌ ಅವರು ತಿಳಿಸಿದ್ದಾರೆ.

ದಸರಾ ರಜೆ ಕಳೆಯಲು ವಿದ್ಯಾರ್ಥಿಗಳ ಗುಂಪು ವಿಜಯವಾಡದಿಂದ ಸೂರ್ಯಲಂಕಕ್ಕೆ ಬಂದಿದ್ದರು. ತೀರದಲ್ಲಿ ಆಟವಾಡುತ್ತಿದ್ದ ಸಂದರ್ಭ ಸಮುದ್ರದ ಆಳದತ್ತ ಸರಿದಿದ್ದಾರೆ. ಈ ವೇಳೆ ದುರಂತ ಸಂಭವಿಸಿದೆ. ಸಮುದ್ರದ ಮಧ್ಯೆ ಬಹಳ ದೂರದಿಂದ ಮೂವರು ಮಕ್ಕಳ ಮೃತದೇಹವನ್ನು ಹೊರ ತೆಗೆಯಲಾಗಿದೆ. ಕಾಣೆಯಾಗಿರುವ ಇನ್ನೂ ಮೂವರಿಗಾಗಿ ಶೋಧಕಾರ್ಯ ನಡೆದಿದೆ ಎಂದು ಎಸ್‌ಪಿ ಹೇಳಿದ್ದಾರೆ.

ADVERTISEMENT

ಮೃತರಲ್ಲಿ ಇಬ್ಬರು ಕ್ರಮವಾಗಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು. ಇನ್ನುಳಿದವರು 10ನೇ ತರಗತಿಯಲ್ಲಿ ಅನುತ್ತೀರ್ಣಗೊಂಡು ಕಲಿಕೆಯನ್ನು ಮೊಟಕುಗೊಳಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಗುಂಪಿನಲ್ಲಿದ್ದವರ ಪೈಕಿ ಕೆಲವರು ಕ್ಯಾಟರಿಂಗ್‌ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಸೂರ್ಯಲಂಕದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗುತ್ತಿರುವುದಾಗಿ ಕುಟುಂಬಸ್ಥರಿಗೆ ತಿಳಿಸಿ ಬಂದಿದ್ದರು. ವಿಜಯವಾಡದಿಂದ ಸೂರ್ಯಲಂಕಕ್ಕೆ ರೈಲಿನ ಮೂಲಕ ಮಂಗಳವಾರ ಬೆಳಗ್ಗೆ ಬಂದಿದ್ದರು ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.