ADVERTISEMENT

ಅಣ್ಣಾ ಹಜಾರೆ ಸತ್ಯಾಗ್ರಹ ಅಂತ್ಯ

ಏಳು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಪಿಟಿಐ
Published 5 ಫೆಬ್ರುವರಿ 2019, 17:25 IST
Last Updated 5 ಫೆಬ್ರುವರಿ 2019, 17:25 IST
   

ಮುಂಬೈ:ಕೇಂದ್ರದಲ್ಲಿ ಲೋಕಪಾಲ ಅನುಷ್ಠಾನ ಮತ್ತು ಲೋಕಪಾಲರ ನೇಮಕಕ್ಕೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಏಳು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮಂಗಳವಾರ ಸಂಜೆ ಹಿಂಪಡೆದಿದ್ದಾರೆ.

ಲೋಕಪಾಲ ನೇಮಕ ಸಂಬಂಧ ಇದೇ 13ರಂದು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸರ್ಕಾರವು ಭರವಸೆ ನೀಡಿದ್ದರಿಂದ ಅವರು ಸತ್ಯಾಗ್ರಹವನ್ನು ನಿಲ್ಲಿಸಿದ್ದಾರೆ.

ADVERTISEMENT

ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ತಮ್ಮ ಗ್ರಾಮ ರಾಳೇಗಣ ಸಿದ್ದಿಯಲ್ಲಿ ಅವರು ಸತ್ಯಾಗ್ರಹ ನಡೆಸುತ್ತಿದ್ದರು.ಕೇಂದ್ರ ಸಚಿವರಾದ ರಾಧಾ ಮೋಹನ್ ಸಿಂಗ್ ಮತ್ತು ಸುಭಾಷ್ ಭಮ್ರೆ ಅವರೊಂದಿಗೆಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಸತ್ಯಾಗ್ರಹದ ಸ್ಥಳಕ್ಕೆ ತೆರಳಿ, ಹಜಾರೆ ಜತೆಗೆ ಮಾತುಕತೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.