ಕಾನ್ಪುರ (ಉತ್ತರ ಪ್ರದೇಶ): ಎಂಟು ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಕಾಸ್ ದುಬೆಯ ಮತ್ತೊಬ್ಬ ಸಹಚರ ಸೋಮವಾರ ನ್ಯಾಯಲಯದ ಎದುರು ಶರಣಾಗಿದ್ದಾನೆ.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬ್ರಜೇಶ್ ಶ್ರೀವಾಸ್ತವ್, ’ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಸೈನಿ ಎಂಬ ಆರೋಪಿ ಕಾನ್ಪುರದ ದೇಹಾತ್ನ ನ್ಯಾಯಾಲಯಕ್ಕೆ ಶರಣಾಗಿದ್ದಾನೆ’ ಎಂದು ತಿಳಿಸಿದ್ದಾರೆ.
ಜುಲೈ 2 ರಂದು ಬಿಕ್ರು ಗ್ರಾಮದಲ್ಲಿ ನಡೆದ ಪೊಲೀಸರ ಹತ್ಯೆ ಪ್ರಕರಣದಲ್ಲಿ ಈತನ ಹೆಸರೂ ಕೇಳಿಬಂದಿತ್ತು. ಅಂದಿನಿಂದಲೂ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಮತ್ತು ಕಾನ್ಪುರ ಪೊಲೀಸರು ಗೋವಿಂದ ಸೈನಿಗಾಗಿ ಶೋಧ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.