ADVERTISEMENT

ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜೂನ್ 2023, 6:10 IST
Last Updated 5 ಜೂನ್ 2023, 6:10 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಭುವನೇಶ್ವರ: ಒಡಿಶಾದ ಬಾಲಸೋರ್‌ನಲ್ಲಿ ಮೂರು ದಿನಗಳ ಹಿಂದಷ್ಟೇ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟಿದ್ದರು. ಈ ಕಹಿ ಘಟನೆ ಜನಮಾನಸದಿಂದ ಮಾಸುವ ಮೊದಲೇ ಒಡಿಶಾದಲ್ಲಿ ಮತ್ತೊಂದು ರೈಲು ಹಳ್ಳಿ ತಪ್ಪಿದೆ.

ಒಡಿಶಾದ ಬರಘಢ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಹೊತ್ತು ಸಾಗುತ್ತಿದ್ದ ಸರಕು ಸಾಗಣೆ ರೈಲಿನ 5 ಬೋಗಿಗಳು ಹಳಿ ತಪ್ಪಿರುವ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಆದರೆ, ಈವರೆಗೆ ಯಾರಿಗೂ ಗಾಯಗಳಾದ ಬಗ್ಗೆ ವರದಿ ಬಂದಿಲ್ಲ. ಈ ಪ್ರದೇಶ ಬಾಲಾಸೋರ್‌ನಿಂದ 500 ಕಿ.ಮೀ ದೂರದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT