ಕೋಯಿಕ್ಕೋಡ್: ಆಗಸ್ಟ್ 7ರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಭಾನುವಾರ ರಾತ್ರಿ ಇಲ್ಲಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ವಿಮಾನ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿದೆ.
ಮೃತಪಟ್ಟ ಮಹಿಳೆಯ ಹೆಸರು ಮಂಜುಳಾ ಕುಮಾರಿ(37). ತಮ್ಮ ಪತಿಯನ್ನು ಭೇಟಿಯಾಗಿ ಬರುವುದಕ್ಕಾಗಿ ಈ ವರ್ಷದ ಆರಂಭದಲ್ಲಿ ದುಬೈಗೆ ತೆರೆಳಿದ್ದರು. ಲಾಕ್ಡೌನ್ ಕಾರಣದಿಂದಾಗಿ ಅಲ್ಲೇ ಉಳಿದಿದ್ದರು.
ಕೋಯಿಕ್ಕೋಡ್ನ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾದ ಆ ವಿಮಾನದಲ್ಲಿ 190 ಮಂದಿ ಪ್ರಯಾಣಿಕರಿದ್ದರು. ಅಪಘಾತದಲ್ಲಿ 18 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆಪಡೆಯುತ್ತಿದ್ದ 53 ವರ್ಷ ವ್ಯಕ್ತಿಯೊಬ್ಬರು ಹಾಗೂ 68 ವರ್ಷದ ಮತ್ತೊಬ್ಬರು ಇದೇ ತಿಂಗಳಲ್ಲಿ ಸಾವನ್ನಪ್ಪಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.