ADVERTISEMENT

ಪೊಲೀಸರ ಹತ್ಯೆ ಘಟನೆ: ಕಾಂಗ್ರೆಸ್ ನಾಯಕ ರಾಹುಲ್‍ ಗಾಂಧಿ ಖಂಡನೆ

ಪಿಟಿಐ
Published 3 ಜುಲೈ 2020, 9:10 IST
Last Updated 3 ಜುಲೈ 2020, 9:10 IST
ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ   

ನವದೆಹಲಿ: ಉತ್ತರ ಪ್ರದೇಶದಲ್ಲಿ ಪೊಲೀಸರಿಗೆ ಸುರಕ್ಷತೆ ಇಲ್ಲ ಎಂಬುದಾದರೆ ಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ ಎಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಕಾನ್ಪುರದಲ್ಲಿ 8 ಪೊಲೀಸರು ಮೃತಪಟ್ಟ ಘಟನೆಯನ್ನು ಅವರು ಖಂಡಿಸಿದ್ದಾರೆ.

‘ಈ ಕೃತ್ಯ ಉತ್ತರಪ್ರದೇಶ ಗೂಂಡಾರಾಜ್ಯ ಎಂಬುದಕ್ಕೆ ಇನ್ನೊಂದು ನಿದರ್ಶನ. ಇಲ್ಲಿ ಪೊಲೀಸರಿಗೂ ರಕ್ಷಣೆ ಇಲ್ಲ’ ಎಂದು ಅವರು ಟೀಕಿಸಿದ್ದಾರೆ.

ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿರುವ ಅವರು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.