ADVERTISEMENT

ಭಾರತದ ಮೇಲೆ ಕೆಟ್ಟದೃಷ್ಟಿ ಬೀರುವವರಿಗೆ ತಕ್ಕ ಉತ್ತರ: ರಾಜನಾಥ್‌ ಸಿಂಗ್‌

ಪಿಟಿಐ
Published 13 ನವೆಂಬರ್ 2022, 14:38 IST
Last Updated 13 ನವೆಂಬರ್ 2022, 14:38 IST
ಹರಿಯಾಣದ ಜಜ್ಜರ್‌ನಲ್ಲಿ ನಿರ್ಮಾಣಗೊಂಡಿರುವ ರಾಜ ಪೃಥ್ವಿರಾಜ್‌ ಚೌಹಾಣ್‌ ಪ್ರತಿಮೆಯನ್ನು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಭಾನುವಾರ ಲೋಕಾರ್ಪಣೆ ಮಾಡಿದರು. ಮುಖ್ಯಮಂತ್ರಿ ಮನೋಹರ್ ಲಾಲ್‌ ಕಟ್ಟರ್‌ ಇದ್ದರು –ಪಿಟಿಐ ಚಿತ್ರ
ಹರಿಯಾಣದ ಜಜ್ಜರ್‌ನಲ್ಲಿ ನಿರ್ಮಾಣಗೊಂಡಿರುವ ರಾಜ ಪೃಥ್ವಿರಾಜ್‌ ಚೌಹಾಣ್‌ ಪ್ರತಿಮೆಯನ್ನು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಭಾನುವಾರ ಲೋಕಾರ್ಪಣೆ ಮಾಡಿದರು. ಮುಖ್ಯಮಂತ್ರಿ ಮನೋಹರ್ ಲಾಲ್‌ ಕಟ್ಟರ್‌ ಇದ್ದರು –ಪಿಟಿಐ ಚಿತ್ರ   

ಚಂಡೀಗಡ : ‘ಭಾರತದ ಮೇಲೆ ಕೆಟ್ಟದೃಷ್ಟಿ ಬೀರುವವರಿಗೆ ಈಗ ತಕ್ಕ ಉತ್ತರ ನೀಡಲಾಗುತ್ತಿದೆ. ರಾಷ್ಟ್ರೀಯ ಹಿತಾಸಕ್ತಿಯ ರಕ್ಷಣೆಯು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮುಖ್ಯ ಗುರಿಯಾಗಿದೆ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ.

ಹರಿಯಾಣದ ಜಜ್ಜರ್‌ನಲ್ಲಿ ನಿರ್ಮಾಣಗೊಂಡಿರುವ ರಾಜ ಪೃಥ್ವಿರಾಜ್‌ ಚೌಹಾಣ್‌ ಪ್ರತಿಮೆಯನ್ನು ಭಾನುವಾರ ಲೋಕಾಪರ್ಣೆಗೊಳಿಸಿ ಅವರು ಮಾತನಾಡಿದರು.

‘ಭಾರತವು ಈಗ ದುರ್ಬಲವಾಗಿ ಉಳಿದಿಲ್ಲ. ನಾವು ಶಾಂತಿಯಲ್ಲಿ ನಂಬಿಕೆ ಇರಿಸಿದವರು. ಆದರೆ, ನಮಗೆ ಹಾನಿಯುಂಟು ಮಾಡುವ ಪ್ರಯತ್ನ ಮಾಡಿದವರಿಗೆ ತಕ್ಕ ಉತ್ತರ ನೀಡಲಾಗುತ್ತಿದೆ. ಇದನ್ನು ನಮ್ಮ ಸೈನಿಕರು ಮತ್ತೆ ಮತ್ತೆ ಸಾಬೀತು ಮಾಡುತ್ತಿದ್ದಾರೆ’ ಎಂದರು.

ADVERTISEMENT

‘ಬ್ರಿಟಿಷರ ಕಾಲದ ಮನಃಸ್ಥಿತಿಯಿಂದ ಹೊರಬರುವ ಉದ್ದೇಶದಿಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ಛತ್ರಪತಿ ಶಿವಾಜಿಯಿಂದ ಸ್ಫೂರ್ತಿ ಪಡೆದುಕೊಂಡು ಭಾರತೀಯ ನೌಕಾಪಡೆಯ ಧ್ವಜವನ್ನು ಬದಲು ಮಾಡಲಾಗಿದೆ. ಸುಮಾರು ಸಾವಿರಕ್ಕೂ ಹೆಚ್ಚು ಬ್ರಿಟಿಷರ ಕಾಲದ ಕಾನೂನುಗಳನ್ನು ರದ್ದು ಪಡಿಸಲಾಗಿದೆ. ಜೊತೆಗೆ, ರಾಜಪಥವನ್ನು ಕರ್ತವ್ಯಪಥ ಎಂದು ಮರುನಾಮಕರಣ ಮಾಡಲಾಗಿದೆ. ಇಂಡಿಯಾ ಗೇಟ್‌ನಲ್ಲಿ ನೇತಾಜಿ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ’ ಎಂದು ವಿವರಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.