ADVERTISEMENT

ಅಮೆರಿಕ ಒಸಾಮಾನನ್ನು ಹೊಸಕಿ ಹಾಕಿತ್ತು; ಅಂಥದು ನಮ್ಮಿಂದಾಗದೇ?– ಅರುಣ್ ಜೇಟ್ಲಿ

ಏಜೆನ್ಸೀಸ್
Published 27 ಫೆಬ್ರುವರಿ 2019, 9:43 IST
Last Updated 27 ಫೆಬ್ರುವರಿ 2019, 9:43 IST
   

ನವದೆಹಲಿ: ‘ಇಂದಿನ ದಿನಗಳಲ್ಲಿ ಎಲ್ಲವೂ ಸಾಧ್ಯವಾಗುತ್ತದೆ’ ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ಹೇಳಿದರು.

ಪಾಕಿಸ್ತಾನದ ಜೆಟ್‌ಗಳು ಭಾರತದ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಸೇನಾ ನೆಲೆಯಾದ ರಜೌರಿಯಲ್ಲಿ ಬಾಂಬ್‌ ದಾಳಿ ನಡೆಸಿದ ಕೆಲವೇ ತಾಸುಗಳಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

2011ರಲ್ಲಿ ಅಮೆರಿಕದ ನೌಕಾಪಡೆ ಸೀಲ್ಪಾಕಿಸ್ತಾನದಲ್ಲಿ ಸೇನಾ ಕಾರ್ಯಾಚರಣೆ ನಡೆಸಿಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‌ನ್ನು ಹೊಸಕಿ ಹಾಕಿದ್ದನ್ನು ಉಲ್ಲೇಖಿಸಿ ಮಾತನಾಡಿದ ಅವರ, ‘ಅಮೆರಿಕ ನೌಕಪಡೆ ಒಸಾಮಾನನ್ನು ಮುಗಿಸಬಹುದಾದರೆ, ಅಂಥದು ನಮ್ಮಿಂದಾಗದೇ? ಈಗ ಎಲ್ಲವೂ ಸಾಧ್ಯವಾಗುತ್ತದೆ’ ಎಂದು ಹೇಳಿದರು.

‘ರಾಜಕೀಯದಲ್ಲಿ ಒಂದು ವಾರವೆಂದರೆ ಸಾಕಷ್ಟು ದೀರ್ಘ. ಅದೇ ಕಳೆದ ಒಂದು ವಾರ ದೇಶ ನಮ್ಮೊಂದಿಗೆ ಸಾಗಿದ ರೀತಿಯನ್ನು ನೋಡಿದರೆ, ಒಂದು ವಾರ ಇಷ್ಟು ಬೇಗ ಪೂರ್ಣಗೊಂಡಿತುಎಂದು ಭಾಸವಾಗುತ್ತದೆ. ಅಮೆರಿಕ ಪಾಕಿಸ್ತಾನದ ಒಳಗೆ ಹೋಗಿ ಅಲ್ ಖೈದಾ ಮುಖ್ಯಸ್ಥನಿಗೆ ಗುಂಡಿಕ್ಕಿತ್ತು. ನಮ್ಮಿಂದಲೂ ಅದು ಸಾಧ್ಯ ಎಂದು ನಮ್ಮ ವಾಯುಪಡೆ ದಾಳಿ ತಿಳಿಸಿದೆ’ ಎಂದರು.

ಇನ್ನಷ್ಟು ಓದು
*ಭಾರತದ ಉರಿ ವಲಯದ ಮೇಲೆ ಪಾಕಿಸ್ತಾನದ ಶೆಲ್‌ ದಾಳಿ ​
*ಗಡಿದಾಟಿದ ಪಾಕ್‌ ಯುದ್ಧ ವಿಮಾನಗಳು; ಭಾರತದ ಸೇನಾ ವಲಯದ ಮೇಲೆ ಬಾಂಬ್‌ ದಾಳಿ
*ಜಮ್ಮು–ಕಾಶ್ಮೀರದಲ್ಲಿ ಭಾರತೀಯ ವಾಯುಪಡೆಯ ಮಿಗ್‌ ವಿಮಾನ ಪತನ; ಇಬ್ಬರು ಪೈಲಟ್‌ ಸಾವು
*ಶ್ರೀನಗರ ಸೇರಿ ಐದು ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನ ಸಂಚಾರಕ್ಕೆ ನಿರ್ಬಂಧ
*ಬಲಾಕೋಟ್‍ನಲ್ಲಿ ವೈಮಾನಿಕ ದಾಳಿ ನಡೆಸಿ ಪಾಕ್‍ಗೆ ಪ್ರತ್ಯುತ್ತರ ನೀಡಿದ ಭಾರತ
*ವೈಮಾನಿಕ ದಾಳಿಯಲ್ಲಿ ಹತರಾಗಿದ್ದು 200 ಉಗ್ರರು!
*ಪಾಕ್‍ ವಿರುದ್ಧ ವೈಮಾನಿಕ ದಾಳಿ ನಡೆಸಿದ ಐಎಎಫ್‍ಗೆ ಟ್ವೀಟ್ ಪ್ರಶಂಸೆ
*ಪಾಕ್ ಉಗ್ರರ ನೆಲೆಗಳ ಮೇಲೆ ದಾಳಿ: ಸೀಬರ್ಡ್ ನೌಕಾನೆಲೆಯಲ್ಲಿ ಭದ್ರತೆ ಹೆಚ್ಚಳ
*ಇಂದಿನ ದಾಳಿ ನವ ಭಾರತದ ಸಂಕಲ್ಪದ ಮುನ್ನುಡಿ: ಅಮಿತ್‌ ಶಾ
*ಪಾಕಿಸ್ತಾನ ಇನ್ನಾದರೂ ತೆಪ್ಪಗಿರಲಿ: ಪ್ರಹ್ಲಾದ ಜೋಶಿ
*ಮೋದಿ ನುಡಿದಂತೆ ನಡೆದಿದ್ದಾರೆ; ಇದು ಪಾಕಿಸ್ತಾನಕ್ಕೆ ಎಚ್ಚರಿಕೆ ಗಂಟೆ -ಸದಾನಂದ ಗೌಡ
*ಉಗ್ರರ ಶಿಬಿರಗಳನ್ನೇ ಗುರಿಯಾಗಿರಿಸಿ ಕಾರ್ಯಾಚರಣೆ ಮಾಡಲಾಗಿದೆ: ವಿಜಯ್ ಗೋಖಲೆ
*ಪುಲ್ವಾಮಾ ದಾಳಿಗೆ ಪ್ರತೀಕಾರ: ಉಗ್ರರ ವಿರುದ್ಧ ಭಾರತ ‘ಯುದ್ಧ’
*ನಮ್ಮ ಸರ್ಕಾರ ಬಳಸುತ್ತಿರುವ ‘ನಾನ್–ಮಿಲಿಟರಿ ಆಕ್ಷನ್’ ಪದಗಳ ಅರ್ಥವೇನು
*ಸಾರ್ವತ್ರಿಕ ಚುನಾವಣೆ ಗಮನದಲ್ಲಿರಿಸಿ ವಾಯುದಾಳಿ ನಡೆಸಿದ ಭಾರತ: ಪಾಕಿಸ್ತಾನ ಆರೋಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.